Visit to combing camp set up to capture man-eating tiger, 11/04/2022
ನರಭಕ್ಷಕ ಹುಲಿಯಿಂದ ಪೀಡಿತವಾದ ಪ್ರದೇಶಕ್ಕೆ ಭೇಟಿ.
ಕಂಡಂಗಾಲ ಶಾಲೆಯಲ್ಲಿರುವ ಅರಣ್ಯ ಕೂಂಬಿಂಗ್ ಸಿಬಿರಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಿ ಹುಲಿ ಕಾರ್ಯಚರಣೆಯ ವಿವರ ಪಡೆದೆ. ಮುಂದಿನ ಕಾರ್ಯಚರಣೆಗೆ ಸ್ಥಳೀಯರ ಮಾಹಿತಿ ಮೇರೆಗೆ ಕಾರ್ಯಚರಣೆ ನಡೆಸಲು ಸಲಹೆ ನೀಡಿದೆ. ಪ್ರತಿದಿನದ ಕಾರ್ಯಚರಣೆಯ ವಿವರಗಳನ್ನು ಸ್ಥಳೀಯ ಮುಖಂಡರಿಗೆ ವಿವರಣೆ ನೀಡಿದರೆ ಗ್ರಾಮಸ್ಥರಲ್ಲಿ ಇರುವ ಆತಂಕ ಕಡಿಮೆಯಾಗುತ್ತದೆ ಎಂಬ ಸಲಹೆಯನ್ನು ಕೂಡ ಅಧಿಕಾರಿಗಳಿಗೆ ನೀಡಲಾಯಿತು. ಈ ಬೇಟಿಯ ಸಮಯದಲ್ಲಿ ಉಪಾದ್ಯಕ್ಷರಾದ ಕಡೇಮಡ ಕುಸುಮ ಜೋಯಪ್ಪ, ಬಿ ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೊಲ್ಲಿರ ಬೋಪಣ್ಣ, ನಾಳಿಯಮ್ಮಂಡ ಉಮೇಶ್ ಕೇಚಮಯ್ಯ, ಮೀದೇರಿರ ನವಿನ್, ಚೇರಂಡ ಜಗನ್, ರೋಷನ್ ಚಂದುರ ಗಣಪತಿ, ನಂಬುಡುಮಾಡ ದಿವ್ಯ, ಚಂದುರ ಸನ್ನು, ರೋಹಿತ್, ಜಗನ್, ಬವನ್, ಸುಬ್ಬಯ್ಯ, ಮುಡಿಯಂಡ ದರ್ಶನ್, ಆಲೆಯಂಡ ಲೋಕೇಶ್ ಹಾಗೂ ಸ್ಥಳೀಯ ಗ್ರಾಮಸ್ಥರು ಬಾಗಿಯಾಗಿದ್ದರು.
#Kodagu #Coorg #Ponnampet #Madikeri #Virajpet #Kandangala #Tiger
KPCC Legal Cell members meet KPCC President DK Shivakumar, 10/04/2022
ಪಕ್ಷದ ಕಾನೂನು ಘಟಕದ ಸದಸ್ಯರ ಜೊತೆ ಕೆ.ಪಿ.ಸಿ.ಸಿ.ಯ ಅಧ್ಯಕ್ಷರಾದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಮಾಡಿ ಪ್ರಸಕ್ತ ಹಲವಾರು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಪಕ್ಷದ ಮತ್ತು ಸಮಾಜದ ಮುಂದಿರುವ ಹಲವಾರು ಕಾನೂನು ಹೋರಾಟಗಳ ಬಗ್ಗೆ ಕೂಡ ದೀರ್ಘ ಚರ್ಚೆ ನಡೆಸಲಾಯಿತು.
#Kodagu #Coorg #Madikeri #Virajpet #Ponnampet
Visit to Brahmarishi Sri Narayana Guru community centre project site, 08/04/2022




Protest against price rise, 07/04/2022
ಪಕ್ಷದ ಕುಟ್ಟ ವಲಯ ಆಯೋಜಿಸಿದ್ದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮತ್ತು ಆ ಭಾಗದ ಪ್ರಮುಖರು ಪಕ್ಷ ಸೇರುವ ಕಾರ್ಯಕ್ರಮದಲ್ಲಿ ಭಾಗವಹಿಸಿದೆ.
ಕುಟ್ಟ ಬಸ್ ನಿಲ್ದಾಣದಿಂದ ಕೊಡವ ಸಮಾಜದ ವರೆಗೂ ಪಾದಯಾತ್ರೆ ಮೂಲಕ ಬಂದ ನೂರಾರು ಪಕ್ಷದ ಬಂಧುಗಳನ್ನು ಉದ್ದೇಶಿಸಿ ಮಾತನಾಡಿದೆವು.
ಮುಕ್ಕತಿರ ನವೀನ್, ಅಪ್ಪಯ್ಯ, ಚೆಂಗಪ್ಪ, ದರ್ಶನ್, ಉಮೇರ್ ಮತ್ತಿತರರು ಪಕ್ಷ ಸೇರ್ಪಡೆಯಾದರು. ಪಕ್ಷ ಸಂಘಟನೆ ಮಾಡಲು ಇನ್ನಷ್ಟು ಶಕ್ತಿಯನ್ನು ಈ ಕಾರ್ಯಕ್ರಮ ತುಂಬಿದೆ.
ಬಡ ಜನರು, ಸೋಷಿತರು, ಸಮಾಜದಲ್ಲಿ ತುಳಿತಕ್ಕೆ ಒಳಗಾದ ಎಲ್ಲಾ ಜನರ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.
#Kodagu #Virajpet #Madikeri #Ponnampet #Kutta
Happy Ugadi, 02/04/2022
